ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
Cross references
ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.
ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.