ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
Cross references
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.