ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
Cross references
ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.