ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
Cross references
ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.