ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
Cross references
ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ