ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
Cross references
ಈ ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು.ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
ಕರ್ತನು ನನ್ನ ಕುರುಬನು; ಕೊರತೆಪಡೆನು.
ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.