ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
Cross references
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ