ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
Cross references
ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು.
ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.