ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
Cross references
ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.