ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
Cross references
ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.
ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಆದದರಿಂದ ನ್ಯಾಯವು ನಮಗೆ ದೂರವಾಯಿತು; ನೀತಿಯು ನಮ್ಮನ್ನು ಸೇರದು; ಬೆಳಕಿ ಗೋಸ್ಕರ ಕಾದುಕೊಳ್ಳುತ್ತೇವೆ, ಆದರೆ ಇಗೋ ಕತ್ತಲೆ, ಪ್ರಕಾಶವನ್ನು ಹಾರೈಸಿ ಅಂಧಕಾರದಲ್ಲಿ ನಡೆದುಕೊಳ್ಳು ತ್ತೇವೆ.
ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.