ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
Cross references
ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ.
ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.