ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
Cross references
ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ.
ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.