ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.
Cross references
ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.
ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು.
ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.