ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
Cross references
ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.
ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.
ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.