ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
Cross references
ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.