ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
Cross references
ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.