ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
Cross references
ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ