Home Bibles ಯೆಶಾಯ 51:20 · ಕನ್ನಡ ಬೈಬಲ್
ಯೆಶಾಯ 51:20 · ಕನ್ನಡ ಬೈಬಲ್

ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.

Cross references

ದ್ವಿತೀಯೋಪದೇಶಕಾಂಡ 14:5

ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ.

ಕೀರ್ತನೆಗಳು 88:15

ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.

ಯೆಶಾಯ 5:25

ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.

ಯೆಶಾಯ 8:21

ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.

ಯೆಶಾಯ 9:19

ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.

ಯೆಶಾಯ 29:9

ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.

ಯೆಶಾಯ 40:30

ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.

ಯೆಶಾಯ 49:26

ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.

ಯೆಶಾಯ 51:17

ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.

ಯೆಶಾಯ 51:21

ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,

ಯೆರೆಮಿಯ 14:16

ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.

ಯೆರೆಮಿಯ 14:18

ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.

ವಿಲಾಪಗಳು 1:15

ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.

ವಿಲಾಪಗಳು 1:19

ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.

ವಿಲಾಪಗಳು 2:11

ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.

ವಿಲಾಪಗಳು 2:12

ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.

ವಿಲಾಪಗಳು 3:15

ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.

ವಿಲಾಪಗಳು 4:2

ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!

ವಿಲಾಪಗಳು 4:11

ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.

ವಿಲಾಪಗಳು 5:13

ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.

ಯೆಹೆಜ್ಕೇಲ 12:13

ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.

ಯೆಹೆಜ್ಕೇಲ 17:20

ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.

ಯೆಹೆಜ್ಕೇಲ 39:19

ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು.

ಪ್ರಕಟನೆ 14:10

ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

ಪ್ರಕಟನೆ 16:9

ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.

Interlinear

Choose Theme