ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
Cross references
ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ.
ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.
ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.