Home Bibles ಯೆಶಾಯ 51:7 · ಕನ್ನಡ ಬೈಬಲ್
ಯೆಶಾಯ 51:7 · ಕನ್ನಡ ಬೈಬಲ್

ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.

Cross references

ದ್ವಿತೀಯೋಪದೇಶಕಾಂಡ 6:6

ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.

ಕೀರ್ತನೆಗಳು 37:31

ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.

ಕೀರ್ತನೆಗಳು 40:8

ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.

ಯೆಶಾಯ 37:6

ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.

ಯೆಶಾಯ 51:1

ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.

ಯೆರೆಮಿಯ 1:17

ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.

ಯೆರೆಮಿಯ 31:33

ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.

ಯೆಹೆಜ್ಕೇಲ 2:6

ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.

ಮತ್ತಾಯ 5:11

ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.

ಮತ್ತಾಯ 10:28

ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.

ಲೂಕ 6:22

ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.

ಲೂಕ 12:4

ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.

ಅಪೋಸ್ತಲರ ಕೃತ್ಯಗಳು 5:41

ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.

2 ಕೊರಿಂಥದವರಿಗೆ 3:3

ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.

ಫಿಲಿಪ್ಪಿಯವರಿಗೆ 3:8

ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.

ಫಿಲಿಪ್ಪಿಯವರಿಗೆ 3:10

ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

ಹೆಬ್ರಿಯರಿಗೆ 10:16

ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.

1 ಪೇತ್ರ 4:4

ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.

1 ಪೇತ್ರ 4:14

ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.

Interlinear

Choose Theme