ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
Cross references
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.