ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
Cross references
ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.