ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
Cross references
ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು.
ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡು, ನನ್ನನ್ನು ಹೊಡೆದು, ಗಾಯಮಾಡಿದರು; ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಕೊಂಡರು.
ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು.
ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ;
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ
ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.