ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
Cross references
ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ