ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
Cross references
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.