ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.
ಆಗ--ಆತನು ಅಪರಾಧಿಗಳೊಂದಿಗೆ ಎಣಿಸಲ್ಪಟ್ಟನು ಎಂಬ ಬರಹವು ನೆರವೇರಿತು.
ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.