ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
Cross references
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.