ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
Cross references
ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.
ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.