ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
Cross references
ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.