ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
Cross references
ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.