ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
Cross references
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.
ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.
ಅವನ ಕೈಗಳು ಬೆರುಲ್ಲಗಳಿಂದ ಜೋಡಿಸಲ್ಪಟ್ಟ ಬಂಗಾರದ ಉಂಗುರಗಳಾಗಿವೆ. ಅವನ ಮೈ ನೀಲಗಳಿಂದ ಖಚಿಸ ಲ್ಪಟ್ಟ ಹೊಳೆಯುವ ದಂತದ ಹಾಗೆ ಅದೆ.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ.
ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.
ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ.