ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
Cross references
ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.