ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
Cross references
ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.
ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
ಆದದರಿಂದ ಅಬ್ರಹಾಮನನ್ನು ವಿಮೋಚಿಸಿದ ಕರ್ತನು ಯಾಕೋಬನ ಮನೆತನದ ವಿಷಯವಾಗಿ ಹೇಳುವದೇನಂದರೆ--ಈಗ ಯಾಕೋಬ್ಯರು ನಾಚಿಕೆ ಪಡುವದಿಲ್ಲ ಇಲ್ಲವೆ ಅವನ ಮುಖವು ಕಳೆಗುಂದು ವದಿಲ್ಲ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.