ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
Cross references
ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.