ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
Cross references
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.
ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.