ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
Cross references
ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ.
ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ;
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.