ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.