Home Bibles ಯೆಶಾಯ 55:2 · ಕನ್ನಡ ಬೈಬಲ್
ಯೆಶಾಯ 55:2 · ಕನ್ನಡ ಬೈಬಲ್

ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!

Cross references

ನಿರ್ಗಮಕಾಂಡ 15:26

ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.

ದ್ವಿತೀಯೋಪದೇಶಕಾಂಡ 11:13

ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ

ಕೀರ್ತನೆಗಳು 22:26

ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.

ಕೀರ್ತನೆಗಳು 34:11

ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.

ಕೀರ್ತನೆಗಳು 36:8

ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.

ಕೀರ್ತನೆಗಳು 63:5

ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ

ಸಾಮೇತಿಗಳು 1:33

ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.

ಸಾಮೇತಿಗಳು 7:23

ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.

ಸಾಮೇತಿಗಳು 8:32

ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.

ಸಾಮೇತಿಗಳು 9:5

ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ

ಸಭಾಪ್ರಸಂಗಿ 6:2

ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.

ಯೆಶಾಯ 1:19

ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;

ಯೆಶಾಯ 25:6

ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.

ಯೆಶಾಯ 44:20

ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.

ಯೆಶಾಯ 46:6

ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.

ಯೆಶಾಯ 51:1

ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.

ಯೆಶಾಯ 51:4

ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.

ಯೆಶಾಯ 51:7

ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.

ಯೆರೆಮಿಯ 2:13

ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.

ಯೆರೆಮಿಯ 31:14

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.

ಹೊಶೇಯ 8:7

ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.

ಹೊಶೇಯ 12:1

ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.

ಹಬಕ್ಕೂಕ 2:13

ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.

ಮತ್ತಾಯ 15:9

ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.

ಮತ್ತಾಯ 22:4

ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.

ಮಾರ್ಕ 7:14

ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;

ಲೂಕ 15:15

ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ

ಲೂಕ 15:23

ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;

ಯೋಹಾನ 6:48

ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.

ರೋಮಾಪುರದವರಿಗೆ 9:31

ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.

ರೋಮಾಪುರದವರಿಗೆ 10:2

ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.

ರೋಮಾಪುರದವರಿಗೆ 10:17

ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.

ಫಿಲಿಪ್ಪಿಯವರಿಗೆ 3:4

ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.

ಹೆಬ್ರಿಯರಿಗೆ 13:9

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.

Interlinear

Choose Theme