ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.