ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
Cross references
ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.
ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.