ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
Cross references
ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?
ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.
ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;
ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.