ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ.
ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.