ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.
Cross references
ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.