ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
Cross references
ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.