ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
Cross references
ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.
ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ
ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ.
ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.
ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.