ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
Cross references
ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.