ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
Cross references
ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.
ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ
ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.