ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
Cross references
ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.