ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
Cross references
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ.
ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!
ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.
ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!