ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
Cross references
ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.